'ಕನ್ನಡದಲ್ಲಿ ವೈಚಾರಿಕ ಸಾಹಿತ್ಯ' : ವಿಚಾರ ಸಾಹಿತ್ಯವೆಂದು ಕರೆಯ ಬಹುದಾದ ಚರ್ಚೆ, ಶಾಸ್ತ್ರ, ಮೀಮಾಂಸೆಯ ಒಂದು ಸಾಹಿತ್ಯ ಪ್ರಕಾರ ಕನ್ನಡದಲ್ಲಿ ಬಹಳ ಹಿಂದಿನಿಂದಲೂ ಸಮೃದ್ಧವಾಗಿ ಬೆಳೆದುಬಂದಿದೆ. ಆದರೆ ಶುದ್ಧ ವೈಚಾರಿಕ ಕೃತಿಗಳು ಹೆಚ್ಚಾಗಿ ಕಾಣಿಸಿಕೊಳ್ಳತೊಡಗಿದ್ದು ಮಾತ್ರ 20ನೆಯ ಶತಮಾನದಲ್ಲಿ. ಶಾಸನಗಳಲ್ಲೂ ವೈಚಾರಿಕ ಅಂಶಗಳು ಕಂಡುಬರುತ್ತವೆಯಾದರೂ ಅವು ಸಾಹಿತ್ಯ ಪ್ರಕಾರಕ್ಕೆ ಹೆಚ್ಚಾಗಿ ಸೇರುವುದಿಲ್ಲ. 10-11ನೆಯ ಶತಮಾನದವರೆಗೆ ಜೈನಸಾಹಿತ್ಯ ತನ್ನ ದಾರ್ಶನಿಕ ರಂಗದಲ್ಲಿಯೂ ವಿಕಾಸಗೊಂಡಿತ್ತು. ಅಂದಿನ ಸಾಹಿತ್ಯದಲ್ಲಿ ಪ್ರಜ್ಞೆ ಮತ್ತು ಭಾವ (ರಸ) ಎಂಬ ಎರಡು ಪ್ರಕಾರಗಳನ್ನು ಕಲ್ಪಿಸಿದರೆ ಪ್ರಜ್ಞೆಯ ಸಾಹಿತ್ಯದ ಅಂಗವಾಗಿ ವ್ಯಾಕರಣ, ಛಂದಸ್ಸು, ಕಾವ್ಯರೀತಿ ಲಕ್ಷಣಾದಿಗಳಷ್ಟಕ್ಕೆ ಮಾತ್ರ ಕನ್ನಡ ವಿಚಾರ ಸಾಹಿತ್ಯ ಸೀಮಿತವಾಗಿತ್ತು. ಇದಕ್ಕೆ ಕವಿರಾಜಮಾರ್ಗ ಸಾಕ್ಷಿ. ಅನಂತರ ಬಂದ ಕೇಶಿರಾಜನ ಶಬ್ದಮಣಿದರ್ಪಣ, ಭಟ್ಟಾಕಳಂಕನ ಶಬ್ದಾನುಶಾಸನ ಅಲ್ಲದೆ ಆಯುರ್ವೇದ, ಜ್ಯೋತಿಷ ಮುಂತಾದವುಗಳನ್ನು ಕುರಿತ ಗ್ರಂಥಗಳು ಆ ಯುಗದ ವೈಚಾರಿಕ ವಾಙ್ಮಯದ ಉದಾಹರಣೆಗಳು (ನೋಡಿ-ಕನ್ನಡದಲ್ಲಿ ಶಾಸ್ತ್ರ ಸಾಹಿತ್ಯ). ಅನಂತರ 12ನೆಯ ಶತಮಾನದಲ್ಲಿ ವೀರಶೈವ ಸಾಹಿತ್ಯಧಾರೆ ಹರಿಯತೊಡಗಿತ್ತು. ಅಂದಿನ ವಿಚಾರಸರಣಿ ಅನಿವಾರ್ಯವಾಗಿ ಮತೀಯ ಸಂಪ್ರದಾಯದ ಹಿನ್ನೆಲೆಯಲ್ಲಿ ಮುಂದುವರಿದರೂ ಸ್ವತಂತ್ರ ವಿಚಾರಗಳು, ಆಲೋಚನೆಗಳ ಮಥನಕ್ರಿಯೆ ನಡೆಯಿತು. ವಚನಸಾಹಿತ್ಯ ಭಕ್ತಿಯ ವೈರಾಗ್ಯ ಶರಣಾರ್ಥಿ ಅನುಭಾವ ನೀತಿ ಧರ್ಮಗಳ ಪ್ರಚಾರ ಪುರಸ್ಕಾರಗಳ ಧ್ವನಿಯಾಯಿತು.
ದೇವನೂರು ಮಹಾದೇವ ಅವರ

ದೇವನೂರು ಮಹಾದೇವ ಇವರು ಕನ್ನಡದ ಪ್ರಖ್ಯಾತ ಸಾಹಿತಿಗಳಲ್ಲಿ ಒಬ್ಬರು.ಹೊಸಗನ್ನಡದ ಇಲ್ಲಿಯವರೆಗಿನ ಸಣ್ಣ ಕತೆಗಳ ಚರಿತ್ರೆಯನ್ನು (೧) ಮಾಸ್ತಿ ಯುಗ (೨) ಲಂಕೇಶ ಯುಗ ಹಾಗು (೩)ದೇವನೂರು ಯುಗ ಎಂದು ವಿಂಗಡಿಸಬಹುದು. ಈವರೆಗಿನ ಇವರ ಸಾಹಿತ್ಯ ಸುಮಾರು ೨೦೦ ಪುಟಗಳಷ್ಟಾಗಬಹುದು. ಆದರೂ ದೇವನೂರರು ಕಥಾಸಾಹಿತ್ಯದಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ.
ಬಾಲ್ಯ, ವಿದ್ಯಾಭ್ಯಾಸ
ದೇವನೂರು ಮಹಾದೇವ ಇವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರಿನವರು. ಜನನ ೧೯೪೮ರಲ್ಲಿ. ತಂದೆ ಸಿ.ನಂಜಯ್ಯ(ಪೋಲಿಸ್ ಕಾನ್ಸ್ ಟೇಬಲ್), ತಾಯಿ ನಂಜಮ್ಮ. ನಂಜನಗೂಡು, ಹುಣಸೂರು ಹಾಗು ಮೈಸೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿದ ಬಳಿಕ ಮೈಸೂರಿನ ಭಾರತೀಯ ಭಾಷಾ ಸಂಸ್ಥೆ ಯಲ್ಲಿ ಕೆಲಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, ಆ ಬಳಿಕ ವ್ಯವಸಾಯದಲ್ಲಿ ತೊಡಗಿ ಮೈಸೂರಿನಲ್ಲಿ ನೆಲೆಸಿದರು. ಪತ್ನಿ ಕೆ.ಸುಮಿತ್ರಬಾಯಿ, ಇಬ್ಬರು ಮಕ್ಕಳು-ಉಜ್ವಲ ಮತ್ತು ಮಿತಾ.ಫೋರ್ಡ ಫೌಂಡೇಶನ್ ಕೊಡಮಾಡಿದ ಸಂಶೋಧನವೇತನವನ್ನು, ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು, ಹಾಸನದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿಯನ್ನು, ಕೇಂದ್ರ ಸಾಹಿತ್ಯ ಅಕಾಡೆಮಿಯ ಫ಼ೆಲೋಶಿಪ್ ಅನ್ನು ನಿರಾಕರಿಸಿದ ಹಿರಿಮೆ ಇವರದು.
ಪ್ರಮುಖ ಸಾಹಿತ್ಯ ಕೃತಿಗಳು
ಬಾಲ್ಯ, ವಿದ್ಯಾಭ್ಯಾಸ
ದೇವನೂರು ಮಹಾದೇವ ಇವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರಿನವರು. ಜನನ ೧೯೪೮ರಲ್ಲಿ. ತಂದೆ ಸಿ.ನಂಜಯ್ಯ(ಪೋಲಿಸ್ ಕಾನ್ಸ್ ಟೇಬಲ್), ತಾಯಿ ನಂಜಮ್ಮ. ನಂಜನಗೂಡು, ಹುಣಸೂರು ಹಾಗು ಮೈಸೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿದ ಬಳಿಕ ಮೈಸೂರಿನ ಭಾರತೀಯ ಭಾಷಾ ಸಂಸ್ಥೆ ಯಲ್ಲಿ ಕೆಲಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, ಆ ಬಳಿಕ ವ್ಯವಸಾಯದಲ್ಲಿ ತೊಡಗಿ ಮೈಸೂರಿನಲ್ಲಿ ನೆಲೆಸಿದರು. ಪತ್ನಿ ಕೆ.ಸುಮಿತ್ರಬಾಯಿ, ಇಬ್ಬರು ಮಕ್ಕಳು-ಉಜ್ವಲ ಮತ್ತು ಮಿತಾ.ಫೋರ್ಡ ಫೌಂಡೇಶನ್ ಕೊಡಮಾಡಿದ ಸಂಶೋಧನವೇತನವನ್ನು, ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು, ಹಾಸನದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿಯನ್ನು, ಕೇಂದ್ರ ಸಾಹಿತ್ಯ ಅಕಾಡೆಮಿಯ ಫ಼ೆಲೋಶಿಪ್ ಅನ್ನು ನಿರಾಕರಿಸಿದ ಹಿರಿಮೆ ಇವರದು.
ಪ್ರಮುಖ ಸಾಹಿತ್ಯ ಕೃತಿಗಳು
- ಕಥಾಸಂಕಲನಗಳು : "ದ್ಯಾವನೂರು"
- ಕಿರು ಕಾದಂಬರಿ : "ಒಡಲಾಳ"'
- ಕಾದಂಬರಿ : 'ಕುಸುಮಬಾಲೆ'
- ಬಿಡಿ ಬರಹಗಳು : 'ಎದೆಗೆ ಬಿದ್ದ ಅಕ್ಷರ'
- ವಯಸ್ಕರ ಶಿಕ್ಷಣ : 'ನೋಡು ಮತ್ತು ಕೂಡು'
- ಅನುವಾದ : 'ಗಾಂಧಿ ಮತ್ತು ಮಾವೋ'
"ಕುಸುಮಬಾಲೆ" ಇವರು ಬರೆದ ಕಾದಂಬರಿ. ಸ್ಥಳೀಯ ಭಾಷೆಯಲ್ಲಿ ಬರೆದ ೭೫ ಪುಟಗಳ ಈ ಕೃತಿಯನ್ನು “ಕನ್ನಡಕ್ಕೆ ಭಾಷಾಂತರಿಸಬೇಕೆಂದು” , ಮತ್ತೊಬ್ಬ ಸಾಹಿತಿ ಚಂದ್ರಶೇಖರ ಪಾಟೀಲ ಹಾಸ್ಯ ಮಾಡಿದ್ದರು. ಅಷ್ಟರ ಮಟ್ಟಿಗೆ ಮೈಸೂರಿನ ಹಳ್ಳಿ ನುಡಿಗಟ್ಟುಗಳು ಆ ಕೃತಿಯಲ್ಲಿದ್ದವು.
ದೇವನೂರು ಮಹಾದೇವರ ಸಾಹಿತ್ಯ ಕುರಿತ ಇತರೆ ಕೃತಿಗಳು
ಅವರ ಬರಹಗಳ ಬಗ್ಗೆ ವಿಮರ್ಶೆ ಹಾಗು ಅನಿಸಿಕೆಗಳನ್ನೊಳಗೊಂಡ "ಯಾರ ಜಪ್ತಿಗೂ ಸಿಗದ ನವಿಲು" ಎಂಬ ಕೃತಿಯನ್ನು ಅಭಿನವ ಪ್ರಕಾಶನ ಹೊರತಂದಿದೆ.
ದೇವನೂರು ಮಹಾದೇವರ ಕಥೆಗಳು, ಕಾದಂಬರಿಗಳು - ಉದಯಕುಮಾರ ಹುಬ್ಬು
ದೇವನೂರು ಮಹಾದೇವ - ಎನ್,ಪಿ.ಶಂಕರನಾರಾಯಣರಾವ್
ಪತ್ರಿಕೋದ್ಯಮ ಮತ್ತು ನಿರ್ವಹಿಸಿರುವ ಜವಾಬ್ದಾರಿಗಳು
ದೇವನೂರು ಮಹಾದೇವ ಅವರು ಕೆಲಕಾಲ ‘ನರಬಂಡಾಯ’ ಹೆಸರಿನ ಪತ್ರಿಕೆ ನಡೆಸಿದರು. ಬಳಿಕ ಅದಕ್ಕೆ ‘ಪಂಚಮ’ ಎಂದು ಹೆಸರಿಟ್ಟರು. ಸುದ್ದಿ ಸಂಗಾತಿ ಪತ್ರಿಕೆಯ ಬೆನ್ನೆಲುಬಾಗಿದ್ದರು.
ಅಧ್ಯಕ್ಷರು -ಜೆ.ಪಿ.ಸ್ವಾಗತ ಸಮಿತಿ ಮತ್ತು ಸರ್ವೋದಯ ಕರ್ನಾಟಕ ಪಕ್ಷ
ಸಂಚಾಲಕರು - ದಲಿತ ಸಂಘರ್ಷ ಸಮಿತಿ
ಸದಸ್ಯರು - ಅಂಬೇಡ್ಕರ್ ಸಾಹಿತ್ಯ ಅನುವಾದ ಮಂಡಲಿ, ಕನ್ನಡ ಕಾವಲು ಸಮಿತಿ
ಅಧ್ಯಾಪಕರು- ಮೈಸೂರಿನ ಭಾರತೀಯ ಭಾಷಾ ಸಂಸ್ಥೆ ಯಲ್ಲಿ
ಸಂದರ್ಶನ ಪ್ರಾಧ್ಯಪಕರು- ಹಂಪಿ ವಿಶ್ವವಿದ್ಯಾನಿಲಯ
ದೇವನೂರು ಮಹಾದೇವರ ಸಾಹಿತ್ಯ ಕುರಿತ ಇತರೆ ಕೃತಿಗಳು
ಅವರ ಬರಹಗಳ ಬಗ್ಗೆ ವಿಮರ್ಶೆ ಹಾಗು ಅನಿಸಿಕೆಗಳನ್ನೊಳಗೊಂಡ "ಯಾರ ಜಪ್ತಿಗೂ ಸಿಗದ ನವಿಲು" ಎಂಬ ಕೃತಿಯನ್ನು ಅಭಿನವ ಪ್ರಕಾಶನ ಹೊರತಂದಿದೆ.
ದೇವನೂರು ಮಹಾದೇವರ ಕಥೆಗಳು, ಕಾದಂಬರಿಗಳು - ಉದಯಕುಮಾರ ಹುಬ್ಬು
ದೇವನೂರು ಮಹಾದೇವ - ಎನ್,ಪಿ.ಶಂಕರನಾರಾಯಣರಾವ್
ಪತ್ರಿಕೋದ್ಯಮ ಮತ್ತು ನಿರ್ವಹಿಸಿರುವ ಜವಾಬ್ದಾರಿಗಳು
ದೇವನೂರು ಮಹಾದೇವ ಅವರು ಕೆಲಕಾಲ ‘ನರಬಂಡಾಯ’ ಹೆಸರಿನ ಪತ್ರಿಕೆ ನಡೆಸಿದರು. ಬಳಿಕ ಅದಕ್ಕೆ ‘ಪಂಚಮ’ ಎಂದು ಹೆಸರಿಟ್ಟರು. ಸುದ್ದಿ ಸಂಗಾತಿ ಪತ್ರಿಕೆಯ ಬೆನ್ನೆಲುಬಾಗಿದ್ದರು.
ಅಧ್ಯಕ್ಷರು -ಜೆ.ಪಿ.ಸ್ವಾಗತ ಸಮಿತಿ ಮತ್ತು ಸರ್ವೋದಯ ಕರ್ನಾಟಕ ಪಕ್ಷ
ಸಂಚಾಲಕರು - ದಲಿತ ಸಂಘರ್ಷ ಸಮಿತಿ
ಸದಸ್ಯರು - ಅಂಬೇಡ್ಕರ್ ಸಾಹಿತ್ಯ ಅನುವಾದ ಮಂಡಲಿ, ಕನ್ನಡ ಕಾವಲು ಸಮಿತಿ
ಅಧ್ಯಾಪಕರು- ಮೈಸೂರಿನ ಭಾರತೀಯ ಭಾಷಾ ಸಂಸ್ಥೆ ಯಲ್ಲಿ
ಸಂದರ್ಶನ ಪ್ರಾಧ್ಯಪಕರು- ಹಂಪಿ ವಿಶ್ವವಿದ್ಯಾನಿಲಯ
ಸಾಮಾಜಿಕ
ದೇವನೂರು ಮಹಾದೇವ ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕರಲ್ಲಿ ಒಬ್ಬರು. ಇವರು ಪ್ರಸ್ತುತ ಕರ್ನಾಟಕ ಸರ್ವೋದಯ ಪಕ್ಷದ ಅಧ್ಯಕ್ಷರಾಗಿದ್ದಾರೆ.
ಗೌರವ, ಪುರಸ್ಕಾರ
ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗು
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿವೆ.
೧೯೯೦ರಲ್ಲಿ ‘ಕುಸುಮಬಾಲೆ’ ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಅಲ್ಲಮಪ್ರಭು ಪ್ರಶಸ್ತಿ-೨೦೧೩
ಬೋಧಿವೃಕ್ಷಪ್ತಶಸ್ತಿ -೨೦೧೩
ವಿ,ಎಂ.ಇನಾಂದಾರ್ಪ್ರಶಸ್ತಿ-ಎದೆಗೆ ಬಿದ್ದ ಅಕ್ಷರ ಕೃತಿಗೆ
ಇವರ ಒಡಲಾಳ ಕೃತಿಗೆ ಕಲ್ಕತ್ತಾದ ಭಾರತೀಯ ಭಾಷಾ ಪರಿಷತ್ ೧೯೮೪ರ ಉತ್ತಮ ಸೃಜನಶೀಲ ಕೃತಿಯೆಂದು ಗೌರವಿಸಿದೆ. ೨೦೧೧ರಲ್ಲಿ ಭಾರತ ಸರ್ಕಾರ ಇವರಿಗೆ ಪದ್ಮಶ್ರಿ ಪ್ರಶಸ್ತಿಯನ್ನು ಕೊಟ್ಟೂ ಗೌರವಿಸಿದೆ,
ಗೌರವ ಡಾಕ್ಟರೇಟ್, ಮೈಸೂರು ವಿಶ್ವವಿದ್ಯಾನಿಲಯ-೨೦೧೪
ಇದಲ್ಲದೆ ಅಮೇರಿಕಾದಲ್ಲಿ ನಡೆದ ‘ಇಂಟರನ್ಯಾಷನಲ್ ರೈಟಿಂಗ್ ಪ್ರೋಗ್ರಾಮ'ದಲ್ಲಿ ಭಾಗವಹಿಸಿದ್ದಾರೆ.
ಎದೆಗೆ ಬಿದ್ದ ಅಕ್ಷರ ಬಿಡಿ ಲೇಖನಗಳು
- ಕನ್ನಡ ದಾರಿದೀಪ
- ಓದು, ಕ್ರಿಯೆಗಳ ಮೂಲಕ ನಿರಂತರವಾಗಿ ಬೆಳೆಸಬೇಕಾದ ಒಂದು ಮಹತ್ವದ ಸಾಂಸ್ಕೃತಿಕ ಪಠ್ಯ
- ಎದೆಗೆ ಬಿದ್ದ ಅಕ್ಷರ : ಒಂದು ಓದು-ನಾಗಣ್ಣ ಕಿಲಾರಿ
- ಎದೆಗೆ ಬಿದ್ದ ಅಕ್ಷರ: ಸಮಾನತೆಯ ಕನಸು ಮತ್ತು ...
- ಎಂದೆಂದಿಗೂ ಸಲ್ಲುವ 'ಎದೆಗೆ ಬಿದ್ದ ಅಕ್ಷರ' – ಓ ...
- ‘ಎದೆಗೆ ಬಿದ್ದ ಅಕ್ಷರ’ : ವಿಮರ್ಶೆ
- ‘ಎದೆಗೆ ಬಿದ್ದ ಅಕ್ಷರ’ : KOER
- ಎದೆಗೆ ಬಿದ್ದ ಅಕ್ಷರ BOOK
No comments:
Post a Comment